ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಳ್ಳಿಹಬ್ಬ ಆಚರಿಸುತ್ತಿರುವ ಕಿರಿಮಂಜೇಶ್ವರ ಶುಭದಾ ಶಾಲೆಗೆ ಈ ಶೈಕ್ಷಣಿಕ ವರ್ಷದಲ್ಲೇ ಗ್ರಾಮೀಣ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದನ್ನು ಪರಿಗಣಿಸಿ ಡೈಮಂಡ್ ಆಫ್ ಏಷ್ಯಾ ಇಂಟರ್ನ್ಯಾಶನಲ್ ಅವಾರ್ಡ್ ಫಾರ್ ಕ್ವಾಲಿಟಿ ಏಜ್ಯುಕೇಶನ್ ಪ್ರಶಸ್ತಿ ಲಭಿಸಿದೆ.
ಈ ಪ್ರಶಸ್ತಿಯನ್ನು ಫೆಬ್ರವರಿ 15 ರಂದು ಥೈಲಾಂಡ್ ರಾಜಧಾನಿಯಾದ ಬ್ಯಾಂಕಾಕ್ನಲ್ಲಿ ನಡೆದ ಹೋಲಿಡೇ ಇನ್ ಹೋಟೇಲ್ ಬ್ಯಾಂಕಾಕ್ ಕಾರ್ಯಕ್ರಮದಲ್ಲಿ ಶುಭದಾ ಶಾಲೆಗಳ ಸಂಸ್ಥಾಪಕರಾದ ಡಾ| ಎನ್. ಕೆ. ಬಿಲ್ಲವ ಹಾಗೂ ಸಂಚಾಲಕ ಶಂಕರ ಎಸ್. ಪೂಜಾರಿ ಸ್ವೀಕರಿಸಿದರು.
ಡಾ| ಎನ್. ಕೆ. ಬಿಲ್ಲವರು ಶೈಕ್ಷಣಿಕ, ಸಾಮಾಜಿಕ, ಸಹಕಾರಿ, ಧಾರ್ಮಿಕ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತಮ್ಮದೇ ಆದ ಸೇವೆ ಸಲ್ಲಿಸುತ್ತಿದ್ದಾರೆ.