Site icon Kundapra.com ಕುಂದಾಪ್ರ ಡಾಟ್ ಕಾಂ

ಗ್ರಾ.ಪಂ. ಚುನಾವಣೆಯಲ್ಲಿ ವಿಜೇತರಿಗೆ ಸಮ್ಮಾನ

ಮರವಂತೆ: ಗ್ರಾ.ಪಂ.ನಲ್ಲಿ ನಡೆದ ಚುನಾವಣೆಯಲ್ಲಿ 13 ಸ್ಥಾನದಲ್ಲಿ ಸ್ಪರ್ಧಿಸಿ ವಿಜೇತರಾದ ಅಭ್ಯರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಜರಗಿತು.

ವಿಜೇತರನ್ನು ಸಮ್ಮಾನಿಸಿ ಮಾತನಾಡಿದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಗ್ರಾ.ಪಂ. ಚುನಾವಣೆಯಲ್ಲಿ ವಿಜೇತರಾದವರು ಜನರೊಂದಿಗೆ ಸ್ಪಂದಿಸುವ ಮೂಲಕ ಗ್ರಾಮದ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಲ್ಲಿ ಮುಂದಾಗಬೇಕಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮದ ಕುಂದು ಕೊರತೆಗಳನ್ನು ಆಲಿಸಿ ಸರಿಯಾದ ನ್ಯಾಯ ಸಮ್ಮತವಾಗಿ ಕೆಲಸ ಮಾಡಬೇಕು ಎಂದರು.

ಬೈಂದೂರು ಕ್ಷೇತ್ರ ಬಿ.ಜೆ.ಪಿ. ಅಧ್ಯಕ್ಷ ಬಿ.ಎಂ.ಸುಕುಮಾರ ಶೆಟ್ಟಿ ಮಾತನಾಡಿ , ಮುಂದಿನ ದಿನಗಳಲ್ಲಿ ಕಾಮಗಾರಿಗಳನ್ನು ನಡೆಸುವಾಗ ಜಾಗರೂಕತೆಯಿಂದ ಹಣ ದುಂದು ವೆಚ್ಚವಾಗದಂತೆ ನೋಡಿಕೊಳ್ಳಬೇಕು. ಗ್ರಾಮದ ಜನರು ನಿಮ್ಮ ಮೇಲೆ ಕಣ್ಣಿಟ್ಟಿರುತ್ತಾರೆ ಎಂದು ಎಚ್ಚರಿಸಿದರು. ಜಿ.ಪಂ. ಸದಸ್ಯ ಬಾಬು ಶೆಟ್ಟಿ ಮತ್ತು ತಾ.ಪಂ. ಸದಸ್ಯ ಮಹೇಂದ್ರ ಪೂಜಾರಿ ಮತ್ತು ನರಸಿಂಹ ಶೆಟ್ಟಿ ಉಪಸ್ಥಿತರಿದ್ದರು.

ಗ್ರಾ.ಪಂ. ಸದಸ್ಯ ಪ್ರಭಾಕರ ಖಾರ್ವಿ ಸ್ವಾಗತಿಸಿ, ಲೊಕೇಶ ಖಾರ್ವಿ ವಂದಿಸಿದರು.

Exit mobile version