Kundapra.com ಕುಂದಾಪ್ರ ಡಾಟ್ ಕಾಂ

ಜೂ.17ರಿಂದ ಬಿಜೆಪಿ ಮಹಾಸಂಪರ್ಕ ಅಭಿಯಾನ

ಉಡುಪಿ: ಬಿಜೆಪಿ ಸದಸ್ಯತ್ವ ಅಭಿಯಾನದ ಎರಡನೇ ಹಂತವಾಗಿ “ಮಹಾಸಂಪರ್ಕ ಅಭಿಯಾನ’ ಹಮ್ಮಿಕೊಳ್ಳಲಾಗಿದ್ದು ಈಗಾಗಲೇ ಸದಸ್ಯತ್ವ ಪಡೆದಿರುವವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮಾಹಿತಿ ಪಡೆಯುವ ಕಾರ್ಯಕ್ರಮ ಈ ಅಭಿಯಾನದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.

ಜೂ.12ರಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾ ಡಿದ ಅವರು, ದೇಶದಲ್ಲಿ 11 ಕೋಟಿಗೂ ಅಧಿಕ ಮಂದಿ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ. ಇದರಿಂದಾಗಿ ವಿಶ್ವದಲ್ಲೇ ಅಧಿಕ ಸದಸ್ಯತ್ವ ಪಡೆದಿರುವ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಉಡುಪಿ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ಮಂದಿ ನವೀಕರಿಸಲ್ಪಟ್ಟ/ಹೊಸ ಸದಸ್ಯರ ನೋಂದಣಿಯಾಗಿದೆ. ಇವರೆಲ್ಲರನ್ನೂ ನೇರವಾಗಿ ಸಂಪರ್ಕಿಸುವ ಕೆಲಸ ಅಭಿಯಾನದಲ್ಲಿ ನಡೆಯಲಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್‌ ಶೆಟ್ಟಿ ಮತ್ತು ಸಂಧ್ಯಾ ರಮೇಶ್‌, ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀಣಾ ಶೆಟ್ಟಿ, ಕಾಪು ಕ್ಷೇತ್ರಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Exit mobile version