Kundapra.com ಕುಂದಾಪ್ರ ಡಾಟ್ ಕಾಂ

ನಾಕಟ್ಟೆ: ಗರಡಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 3 ಲಕ್ಷ ದೇಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ನಾಕಟ್ಟೆ ಕೋಟಿ ಚನ್ನಯ್ಯ ಪಂಜುರ್ಲಿ ಗರಡಿ ಜಿರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. ೩ ಲಕ್ಷ ದೇಣಿಗೆಯನ್ನು ನೀಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಗಣೇಶ್ ದೇಣಿಗೆಯಾಗಿ ಬಂದ 3 ಲಕ್ಷ ರೂಗಳ ಚೆಕ್ಕನ್ನು ನಾಕಟ್ಟೆಯ ಕೋಟಿ ಚನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಶಿವರಾಮ ಪೂಜಾರಿ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷ ರಘುರಾಮ ಪೂಜಾರಿ, ತಾಲೂಕು ಯೋಜನಾಧಿಕಾರಿ ಶಶಿರೇಖಾ, ಬೈಂದೂರು ಮೇಲ್ವಿಚಾರಕಿ ಪ್ರೇಮಾ, ಯಡ್ತರೆ ಒಕ್ಕೂಟದ ಸೇವಾ ಪ್ರತಿನಿಧಿ ಅನಿತಾ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ದೈವಸ್ಥಾನದ ಅರ್ಚಕ ಕುಟುಂಬದ ಗಣೇಶ್, ಸ್ಥಳೀಯರಾದ ಆನಂದ ಶೆಟ್ಟಿ, ಮುತ್ತಯ್ಯ ಪೂಜಾರಿ, ಚಂದ್ರ ಪೂಜಾರಿ, ಅಣ್ಣಪ್ಪ ಪೂಜಾರಿ ಮೊದಲಾದವರು ಇದ್ದರು.

 

Exit mobile version