Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲಾ ಯುವ ಮಂಡಲ: ಪ್ರಶಸ್ತಿ – ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತ ಸರಕಾರದ ನೆಹರು ಯುವ ಕೇಂದ್ರ, ಯುವಕ-ಯುವತಿ ಮಂಡಳಿಗಳಿಗೆ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಯನ್ನು ಪ್ರತಿವರ್ಷ ನೀಡುತ್ತಾ ಬಂದಿದ್ದು, ಅದರಂತೆ 2018-19 ರ ಸಾಲಿನ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಯುವಕ/ ಯುವತಿ ಮಂಡಳಗಳು ಜಿಲ್ಲಾ ನೊಂದಾಣಾಧಿಕಾರಿಗಳ ಕಛೇರಿಯಲ್ಲಿ ನೋಂದಾವಣೆಯಾಗಿದ್ದು, ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರಬೇಕು. ಕಳೆದ ಸಾಲಿನ 2018-19 ರಲ್ಲಿ ಗ್ರಾಮ/ಪಟ್ಟಣ/ತಾಲೂಕು ಅಭಿವೃದ್ಧಿಗಾಗಿ ಜನಪರ ಕಾರ‍್ಯಕ್ರಮಗಳನ್ನು ನಡೆಸಿರಬೇಕು. ಮಾಹಿತಿಯು ಎಪ್ರಿಲ್ 1, 2018 ರಿಂದ ಮಾರ್ಚ್ 31, 2019 ರ ಒಳಗಿರಬೇಕು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಯುವ ಮಂಡಳಕ್ಕೆ 25,000 ರೂ., ಪ್ರಶಸ್ತಿ ಪತ್ರ ನೀಡಲಾಗುವುದು.

ಸಂಪೂರ್ಣ ಮಾಹಿತಿ ಹಾಗೂ ಅರ್ಜಿಗಳನ್ನು ನೆಹರು ಯುವ ಕೇಂದ್ರ (ಬಿ-102, ಜಿಲ್ಲಾಧಿಕಾರಿ ಕಛೇರಿ ಆವರಣ), ರಜತಾದ್ರಿ, ಮಣಿಪಾಲ, ಉಡುಪಿ ಇವರ ಕಛೇರಿಯಿಂದ ಪಡೆದುಕೊಳ್ಳಬಹುದಾಗಿದೆ. ಸ್ಥಳೀಯ ಅರ್ಜಿಗಳನ್ನು ಸಲ್ಲಿಸಲು ಸೆಪ್ಟಂಬರ್ ೨೫ ಕೊನೆಯ ದಿನ.

ಆಸಕ್ತ ಉಡುಪಿ ಜಿಲ್ಲೆಯ ಯುವಕ/ಯುವತಿ ಮಂಡಳಗಳು ಸಂಪೂರ್ಣ ಮಾಹಿತಿ ಹಾಗೂ ದಾಖಲೆಗಳೊಂದಿಗೆ ಅರ್ಜಿಯನ್ನು ವಿಲ್ಲ್‌ಫ್ರೆಡ್ ಡಿ’ಸೋಜ, ಜಿಲ್ಲಾ ಯುವ ಸಮನ್ವಯಾಧಿಕಾರಿ, ನೆಹರು ಯುವ ಕೇಂದ್ರ, (ಜಿಲ್ಲಾಧಿಕಾರಿ ಕಛೇರಿ ಆವರಣ), ರಜತಾದ್ರಿ, ಮಣಿಪಾಲ, ಉಡುಪಿ (ದೂ: ಉಡುಪಿ-0820-2574992) ಇವರಿಗೆ ಸಲ್ಲಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ವಿಲ್ಲ್‌ಫ್ರೆಡ್ ಡಿ’ಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Exit mobile version