Kundapra.com ಕುಂದಾಪ್ರ ಡಾಟ್ ಕಾಂ

ಜು.27: ನನ್ನ ಫಾರಿನ್ ಟೂರಿಂಗ್ ಟಾಕೀಸ್ ಕೃತಿ ಬಿಡುಗಡೆ

ಕೆನಡಾದಲ್ಲಿ ಯಾಕುಬ್ ಖಾದರ್ ಗುಲ್ವಾಡಿಯ ನನ್ನ ಫಾರಿನ್ ಟೂರಿಂಗ್ ಟಾಕೀಸ್ ಕೃತಿ ಬಿಡುಗಡೆ

ಕುಂದಾಪುರ: ಸಾಹಿತಿ, ನಟ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಯಾಕುಬ್ ಖಾದರ್ ಗುಲ್ವಾಡಿಯವರು ಜೂನ್ 27 ಹಾಗೂ 28ರಂದು ಕೆನಡಾದ ಟೋರೆಂಟೋದಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಕರ್ನಾಟಕ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ ಸದಸ್ಯರಾಗಿ, ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಧಾನ ಕಾರ್ಯನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿರುವ ಯಾಕುಬ್ ಖಾದರ್ ಅವರ ನಾಲ್ಕು ದೇಶಗಳ ಪ್ರವಾಸ ಕಥನ ನನ್ನ ಫಾರಿನ್ ಟೂರಿಂಗ್ ಟಾಕೀಸ್ ಕೃತಿಯನ್ನು ಸಮ್ಮೇಳನದಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕ ಡಾ.ನಾಗತಿಹಳ್ಳಿ ಚಂದ್ರ ಶೇಖರ ಅವರು ಬಿಡುಗಡೆಗೊಳಿಸಲಿದ್ದಾರೆ. ಈ ಸಮ್ಮೇಳನದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಸಚಿವರಾದ ಎಚ್. ಆಂಜನೇಯ ಅವರು ಉದ್ಘಾಟಿಸಲಿದ್ದಾರೆ. ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಎಲ್. ಹನುಮಂತಯ್ಯ, ಶಿವಗಂಗೆ ಗವಿಮಠದ ಶ್ರೀ ಮಲೆಯ ಶಾಂತಮುನಿ ದೇಶಿಕೇಂದ್ರ ಸ್ವಾಮೀಜಿ, ಖ್ಯಾತ ಚಲನಚಿತ್ರ ನಟ ದರ್ಶನ್ ತೂಗುದೀಪ, ಡಬ್ಲ್ಯೂಕೆಸಿಸಿ ಅದ್ಯಕ್ಷರಾದ ಇಂ. ಕೆ.ಪಿ. ಮಂಜುನಾಥ ಸಾಗರ್, ಕೆನಡಾದ ಕನ್ನಡ ಕಸ್ತೂರಿ ನಿರ್ದೇಶಕರಾದ ನಾಗರಾಜು ಬಿ.ವಿ ಉಪಸ್ಥಿತರಿರುವರು.

Exit mobile version