Kundapra.com ಕುಂದಾಪ್ರ ಡಾಟ್ ಕಾಂ

ಮಯ್ಯಾಡಿ ಶಾಲಾ ಮುಖ್ಯ ಶಿಕ್ಷಕ ರಾಮಣ್ಣ ನಾಯ್ಕ್ ಅವರಿಗೆ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮಯ್ಯಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಇದರ ಮುಖ್ಯೋಪಧ್ಯಾಯ ಕೆ. ರಾಮಣ್ಣ ನಾಯ್ಕ್ ಅವರಿಗೆ ಪ್ರಸಕ್ತ ಸಾಲಿನ ಉಡುಪಿ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ಒಲಿದು ಬಂದಿದೆ.

ಬ್ರಹ್ಮಾವರದ ಚೇರ್ಕಾಡಿಯವರಾದ ರಾಮಣ್ಣ ನಾಯ್ಕ್ ಅವರು ಎಸ್‌ಡಿಎಂ ಶಿಕ್ಷಣ ಸಂಸ್ಥೆಯಿಂದಶಿಕ್ಷಕ ವೃತ್ತಿ ಆರಂಭಿಸಿದ್ದರು. ಕಳೆದ ೩೦ ವರ್ಷಗಳಿಂದ ಮಯ್ಯಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದಾರೆ.

Exit mobile version