Kundapra.com ಕುಂದಾಪ್ರ ಡಾಟ್ ಕಾಂ

ಯುವ ಗಾಯಕ ಸತೀಶ್ ರಾಮಕುಮಾರ್ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಕಳವಾಡಿ ಯುವ ಗಾಯಕ ಸತೀಶ್ ರಾಮ್ ಕುಮಾರ್ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಣಿಪಾಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೆ.26ರಂದು ನಿಧನರಾದರು.

ಸವಿ ಸವಿ ನೆನಪು ಕಲಾತಂಡವನ್ನು ಕಟ್ಟಿ ಸಾವಿರಾರು ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಿದ್ದ ಅವರು ಕಾರ್ಯಕ್ರಮ ಸಂಘಟನೆ, ನಿರೂಪಣೆ ಸೇರಿದಂತೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಸೌಂಡ್ಸ್ & ಲೈಟಿಂಗ್ಸ್ ಉದ್ಯಮವನ್ನು ಮಾಡಿಕೊಂಡಿದ್ದರು.

Exit mobile version