Kundapra.com ಕುಂದಾಪ್ರ ಡಾಟ್ ಕಾಂ

ನರೇಂದ್ರ ಎಸ್ ಗಂಗೊಳ್ಳಿ ಅವರು ರಾಧೆಯ ಸ್ವಗತಕ್ಕೆ ಪ್ರಥಮ ಬಹುಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕವಯಿತ್ರಿ ಸುಮಿತ್ರಾ ಡಿ ಐತಾಳ್ ಅವರ ಕವನ ಸಂಕಲನ ಮೌನರತಿ ಬಿಡುಗಡೆಯ ಅಂಗವಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಕವನ ಸ್ಪರ್ಧೆಯ ಸಾರ್ವಜನಿಕ ವಿಭಾಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಯವರು ರಚಿಸಿದ ಕವನ “ರಾಧೆಯ ಸ್ವಗತ” ಪ್ರಥಮ ಬಹುಮಾನ ಪಡೆದಿದ್ದು ಅವರನ್ನು ಕಳೆದ ಭಾನುವಾರ ನಡೆದ ಸಮಾರಂಭದ ವೇದಿಕೆಯಲ್ಲಿ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕವಯಿತ್ರಿ ಸುಮಿತ್ರಾ ಡಿ ಐತಾಳ್, ಕುಂದಪ್ರಭ ಪತ್ರಿಕೆಯ ಸಂಪಾದಕ ಯು.ಎಸ್.ಶೆಣೈ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಎ. ಎಸ್.ಎನ್ ಹೆಬ್ಬಾರ್, ಉತ್ತಮ ಹೋಮಿಯೋ ಕ್ಲಿನಿಕ್ ನ ಡಾ.ಉತ್ತಮ ಕುಮಾರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

Exit mobile version