Kundapra.com ಕುಂದಾಪ್ರ ಡಾಟ್ ಕಾಂ

ಯಲ್ಲಾಪುರದಲ್ಲಿ ಬಸ್‌ ಅಪಘಾತ: ಕುಂದಾಪುರದ ಚಾಲಕ ಸಾವು

ಕುಂದಾಪುರ: ಯಲ್ಲಾಪುರದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಸ್ಸಿನ ಚಾಲಕ ಕುಂದಾಪುರದ ನಿವಾಸಿ ಮಹಾಬಲ ಪೂಜಾರಿ ಅವರು ಮೃತಪಟ್ಟಿದ್ದಾರೆ.

ಖಾಸಗಿ ಬಸ್ಸು ಮಂಗಳೂರಿನಿಂದ ಮುಂಬೈಗೆ ಸಾಗುತ್ತಿದ್ದು ಹೆದ್ದಾರಿಯಲ್ಲಿ ಬಿದ್ದ ಮರವನ್ನು ತಪ್ಪಿಸಲು ಚಾಲಕ ಬಸ್ಸನ್ನು ತೀರಾ ಎಡಗಡೆಗೆ ತೆಗೆದುಕೊಂಡ ಹಿನ್ನಲೆಯಲ್ಲಿ ಬಸ್ಸು ಟ್ರಕ್‌ಗೆ ಢಿಕ್ಕಿ ಹೊಡೆದಿತ್ತು. ಅಪಘಾತದಿಂದ ಇನ್ನೋರ್ವ ಚಾಲಕ, ಕ್ಲಿನರ್‌ ಉದಯ ಹಾಗೂ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದರು. ಮಹಾಬಲ ಪೂಜಾರಿ ಅವರ ಮೃತ ದೇಹವನ್ನು ಮಂಗಳವಾರ ಕುಂದಾಪುರಕ್ಕೆ ತರಲಾಗಿದ್ದು ಆಗ ಬೃಹತ್‌ ಸಂಖ್ಯೆಯಲ್ಲಿ ಜನರು ನರೆದಿದ್ದರು. ಸಚಿವ ವಿನಯ ಕುಮಾರ್‌ ಸೊರಕೆ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

Exit mobile version