Kundapra.com ಕುಂದಾಪ್ರ ಡಾಟ್ ಕಾಂ

ಡಾ. ಎಂ. ಮೋಹನ ಆಳ್ವರಿಗೆ ಬಸ್ರೂರು ಅಪ್ಪಣ್ಣ ಹೆಗ್ಡೆ ಶಿಕ್ಷಣ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಾಮಾಜಿಕ ಕಳಕಳಿಯೊಂದಿಗೆ ಸ್ಥಾಪನೆಯಾಗಿರುವ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ದಶಮಾನೋತ್ಸವದ ಸಂಭ್ರಮಾಚರಣೆಯಲ್ಲಿದೆ. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಬಸ್ರೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿರುವ ಬಿ.ಅಪ್ಪಣ್ಣ ಹೆಗ್ಡೆಯವರಿಗೆ 85 ವರ್ಷಗಳು ತುಂಬುತ್ತಿದ್ದು, ಇದರ ಅಂಗವಾಗಿ ಡಿ.24 ರಂದು ಬಸ್ರೂರು ಶ್ರೀ ಶಾರದಾ ಕಾಲೇಜಿನ ಬಯಲು ರಂಗ ಮಂದಿರದಲ್ಲಿ ಜನ್ಮ ದಿನಾಚರಣೆ, ಪ್ರಶಸ್ತಿ ಪ್ರದಾನ ಹಾಗೂ ಅಶಕ್ತರಿಗೆ ದತ್ತಿನಿಧಿ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ಸಂಚಾಲಕ ರಾಮಕಿಶನ್ ಹೆಗ್ಡೆ ಹೇಳಿದರು.

ಅವರು ಶುಕ್ರವಾರ ಬಸ್ರೂರು ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರತಿಷ್ಠಾನದ ವತಿಯಿಂದ ಅನಾರೋಗ್ಯ ಹೊಂದಿರುವವರಿಗೆ ಹಾಗೂ ಅರ್ಹ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ದತ್ತಿನಿಧಿಯನ್ನು ವಿತರಿಸಲಾಗುವುದು. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವಾ ಅವರಿಗೆ ಬಸ್ರೂರು ಅಪ್ಪಣ್ಣ ಹೆಗ್ಡೆ ಶಿಕ್ಷಣ ಪ್ರಶಸ್ತಿಯನ್ನು ನೀಡಲಾಗುವುದು. ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತರಾದ ಡಾ.ಜಿ .ಭೀಮೇಶ್ವರ ಜೋಷಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಾಜಿ ಸಚಿವ ಕೆ ಅಮರನಾಥ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತ ಮಂಡಳಿಯ ಸದಸ್ಯ ಡಿ.ಹರ್ಷೇಂದ್ರಕುಮಾರ್ ಮುಖ್ಯ ಅಭ್ಯಾಗತರಾಗಿರಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಆಳ್ವಾಸ್ ವಿದ್ಯಾರ್ಥಿಗಳಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ. ಕಾರ್ಯಕ್ರಮದಲ್ಲಿ ಅಂದಾಜು 5,000 ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

ಸುದ್ದಿಗೋಷ್ಠಿಯಲ್ಲಿ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ, ಅನುಪಮಾ ಎಸ್‌ ಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ ಗಾಣಿಗ, ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ರಾಧಾಕೃಷ್ಣ ಶೆಟ್ಟಿ ಇದ್ದರು.

Video

 

Exit mobile version