Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ ಬಡಾಕೆರೆ ಸೊಸೈಟಿ ಚುನಾವಣೆ: ಎಸ್. ರಾಜು ಪೂಜಾರಿ ತಂಡ ಅವಿರೋಧ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮರವಂತೆ: ನಾವುಂದ, ಮರವಂತೆ, ಬಡಾಕೆರೆ, ಹೇರೂರು ಗ್ರಾಮಗಳ ವ್ಯಾಪ್ತಿಯ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಪ್ರಸಕ್ತ ಅಧ್ಯಕ್ಷ ಎಸ್. ರಾಜು ಪೂಜಾರಿ ನೇತೃತ್ವದ ತಂಡ ಅವಿರೋಧವಾಗಿ ಚುನಾಯಿತವಾಗಿದೆ. ಹಾಲಿ ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ, ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ವಾಸು ಪೂಜಾರಿ, ರಾಮಕೃಷ್ಣ ಖಾರ್ವಿ, ನಾರಾಯಣ ಶೆಟ್ಟಿ, ಎಂ. ನಾಗಮ್ಮ, ಸರೋಜಾ, ಪ್ರಕಾಶ ದೇವಾಡಿಗ, ರಾಮ ಗಾಂಧಿನಗರ, ಭೋಜ ನಾಯ್ಕ್ ಆಯ್ಕೆಯಾದ ಇತರರು.

ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ಅರುಣಕುಮಾರ ಎಸ್. ವಿ. ಇದನ್ನು ಪ್ರಕಟಿಸಿದ್ದಾರೆ.

 

Exit mobile version