Kundapra.com ಕುಂದಾಪ್ರ ಡಾಟ್ ಕಾಂ

ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ‘ಜನಾನಮನ ಕಾರುಣ್ಯ ಸ್ಪರ್ಷ’ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕತಾರ್: ಫನ್ ಡೇ ಕ್ಲಬ್ ವತಿಯಿಂದ ’ಜನಾನಮನ ಮಹಾತ್ಮ ಪುರಸ್ಕಾರ ಸಮರ್ಪಣಾ ಹಾಗೂ ಕಲಾ ಸಂಧ್ಯ’ ಕಾರ್ಯಕ್ರಮ ಭಾರತೀಯ ಸಾಂಸ್ಕೃತಿಕ ಕೇಂದ್ರದ ’ಅಶೋಕ’ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭ ಪದ್ಮಶ್ರೀ, ಪದ್ಮವಿಭೂಷಣ ಪುರಸ್ಕೃತ ಚಲನಚಿತ್ರ ನಿರ್ದೇಶಕ, ಅಡೂರು ಗೋಪಾಲಕೃಷ್ಣ ಅವರನ್ನು ’ಜನಾನಮನ ಮಹಾತ್ಮ’ ಪ್ರಶಸ್ತಿಯನ್ನಿತ್ತು ಗೌರವಿಸಲಾಯಿತು.

ಈ ಸಂದರ್ಭ ಭಾರತೀಯ ಸಮುದಾಯ ಹಿತನಿಧಿ ಸಂಘದ ಜಂಟಿ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರನ್ನು ’ಜನಾನಮನ ಕಾರುಣ್ಯ ಸ್ಪರ್ಷ’ ಪುರಸ್ಕಾರ ನೀಡಿ ಗೌರವಿಸಿದರು. ಕೇರಳ ಮೂಲದ ಪ್ರತಿಷ್ಠಾನವು ಕರ್ನಾಟಕದ ಜನಸೇವಕನಿಗೆ, ಅವರ ಸಹೃದಯ ಸಮಾಜ ಸೇವೆಯನ್ನು ಗುರುತಿಸಿ ಗೌರವಿಸುತ್ತಿರುವುದು ಕತಾರಿನಲ್ಲಿ ಇದೇ ಮೊದಲ ಭಾರಿಯಾಗಿದೆ. ಗಾಯನ, ಕುಚುಪುಡಿ ನೃತ್ಯ ಪ್ರದರ್ಶನಗೊಂಡವು.

Exit mobile version