Kundapra.com ಕುಂದಾಪ್ರ ಡಾಟ್ ಕಾಂ

ಪಂಚಗಂಗಾ ರೈ.ಸೇ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಪ್ರತಿಷ್ಠಿತ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ಸಂತೋಷ್ ಕುಮಾರ್ ಶೆಟ್ಟಿ ಹಕ್ಲಾಡಿ, ಉಪಾಧ್ಯಕ್ಷರಾಗಿ ಚಂದ್ರ ನಾಯ್ಕ್ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ, ಆನಂದ್ ಪಿ.ಎಚ್, ಅಂತೋನಿ ಲೂಯಿಸ್, ಚಂದ್ರ ಪೂಜಾರಿ, ಸಂತೋಷ ಕುಮಾರ್ ಶೆಟ್ಟಿ ತೋಟಬೈಲು, ಚಂದ್ರಶೇಖರ ಪೂಜಾರಿ, ಹಿಂದುಳಿದ ವರ್ಗ ಎಚ್. ರಾಜೀವ ದೇವಾಡಿಗ, ಮಹಿಳಾ ಮೀಸಲು ಚಂದ್ರಮತಿ ಹೆಗ್ಡೆ, ಸಾಧು ಎಸ್ ಬಿಲ್ಲವ, ಪರಿಶಿಷ್ಟ ಜಾತಿ ಮೀಸಲು ಅನಂತ ಮೋವಾಡಿ, ಪರಿಶಿಷ್ಟ ಪಂಗಡ ಶಾರದಾ ನಿರ್ದೇಶಕರಾಗಿ ಆಯ್ಕೆ ಆಗಿದ್ದಾರೆ.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹಾಗೂ ದಕ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಂಘ ನಿರ್ದೇಶಕ ರಾಜು ಪೂಜಾರಿ, ಮೊಳಹಳ್ಳಿ ಸಹಕಾರಿ ಸಂಘ ಅಧ್ಯಕ್ಷ ಮೊಳಹಳ್ಳಿ ಮಹೇಶ್ ಹೆಗ್ಡೆ, ಎಸ್.ಡಿ.ಸಿ.ಸಿ. ಬ್ಯಾಂಕ್ ಮೇಲ್ವಿಚಾರಕ ಶಿವರಾಮ ಪೂಜಾರಿ, ಮಾಜಿ ನಿರ್ದೇಶಕ ರಘುರಾಮ ಶೆಟ್ಟಿ ಹಾಗೂ ನಿರ್ದೇಶಕ ಮಂಡಳಿ ಸದಸ್ಯರಿಗೆ ಅಭಿನಂದಿಸಿದ್ದಾರೆ. ಚುನಾವಣೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

 

Exit mobile version