Kundapra.com ಕುಂದಾಪ್ರ ಡಾಟ್ ಕಾಂ

ಭಾರತ ಸೇವಾದಲದ ಅಧಿನಾಯಕಿ ಜ್ಯೋತಿ ಹೆಚ್. ಎಸ್ ಅವರಿಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಭಾರತ ಸೇವಾದಳ ಕೇಂದ್ರ ಸಮಿತಿ ಬೆಂಗಳೂರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಇತ್ತಿಚಿಗೆ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳದಲ್ಲಿ ಏಳಜಿತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಜ್ಯೋತಿ ಹೆಚ್. ಎಸ್ ಅವರನ್ನು ‘ಅತ್ಯುತ್ತಮ ಶಾಖಾನಾಯಕಿ’ ಎಂದು ಪರಿಗಣಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜ್ಯೋತಿ ಅವರು ಹಲವು ವರ್ಷಗಳಿಂದ ಭಾರತ ಸೇವಾದಲವನ್ನು ಶಾಲೆಯಲ್ಲಿ ಪ್ರಾರಂಭಿಸಿ ಮಕ್ಕಳಲ್ಲಿ ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಭಾವೈಕ್ಯತೆ ಮುಂತಾದ ಸದ್ಗುಣಗಳನ್ನು ಮೂಡಿಸಿರುವುದಲ್ಲದೇ, ಸೇವಾದಲ ಬೈಂದೂರು ವಲಯದ ಅಧಿನಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಭಾರತ ಸೇವಾದಳ ಕೇಂದ್ರ ಸಮಿತಿ ಆಯೋಜಿಸಿದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಈರ್ವರನ್ನು ಈ ಪ್ರಶಸ್ತಿ ಆಯ್ಕೆ ಮಾಡಲಾಗಿತ್ತು.

 

 

Exit mobile version