ಕುಂದಾಪ್ರ ಡಾಟ್ ಕಾಂ ಸುದ್ದಿ
ಕುವೈಟ್: ಕಳೆದ 35 ವರ್ಷಗಳಿಂದ ಕುವೈತ್ನಲ್ಲಿ ಅಸ್ತಿತ್ವದಲ್ಲಿರುವ ಭಾರತದ, ಕರ್ನಾಟಕ ರಾಜ್ಯ ಮೂಲದ ಸಾಮಾಜಿಕ, ಸಾಂಸ್ಕೃತಿಕ ಸಂಘವಾದ ಕುವೈತ್ಕನ್ನಡಕೂಟದ (ಕು.ಕ.ಕೂ.)ವಾರ್ಷಿಕ ಮಹಾಸಭೆಯನ್ನು ೨೦೧೯ ರ ಡಿಸೆಂಬರ್ ೨೮ ರಂದು ಖೈತಾನ್ನ ಭಾರತೀಯ ಸಮುದಾಯ ಶಾಲೆಯಲ್ಲಿ ನಡೆಸಲಾಯಿತು.
ಮಹಾಸಭೆಯ ಜೊತೆಜೊತೆಗೆ ವಿವಿಧ ವಿನೋದಾವಳಿಯನ್ನೊಳಗೊಂಡ ಕಾರ್ಯಕ್ರಮದಲ್ಲಿ, 2020 ರ ಕೂಟದ ನಿರ್ವಹಣೆಯ ಮೇಲ್ವಿಚಾರಣೆ ನಡೆಸಲು ಹೊಸ ಕಾರ್ಯಕಾರಿ ಸಮಿತಿಯನ್ನು ಆಯ್ಕೆಮಾಡಲಾಯಿತು.
ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಿಎಗುರುರಾಜ್ರಾವ್ ಅವರು ಸರ್ವಾನುಮತದಿಂದ ಚುನಾಯಿತರಾದ ಸದಸ್ಯರನ್ನು ಘೋಷಿಸಿದರು.
ಅಧ್ಯಕ್ಷರು: ರಾಜೇಶವಿಟ್ಟಲ್
ಉಪಾಧ್ಯಕ್ಷರು: ಸಂದೀಪ್ಚಬ್ಬಾ
ಕಾರ್ಯದರ್ಶಿ: ಪ್ರವೀಣ್ಕುಮಾರ್ಶೆಟ್ಟಿ
ಖಜಾಂಚಿ: ಪ್ರದೀಪ್ರಾವ್ಆಳುಗ್ಗೇಲು
ಚುನಾಯಿತರಾದ ಸದಸ್ಯರು 2020 ರ ವರ್ಷಕ್ಕೆಕುವೈತ್ ಕನ್ನಡ ಕೂಟದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಭೆಯಲ್ಲಿ ನೆರೆದ ಸದಸ್ಯರು ಅಧಿಕಾರ ಪದಗ್ರಹಣ ಮಾಡಿದ ಹೊಸ ಕಾರ್ಯಕಾರಿ ಸಮಿತಿಗೆ ಶುಭ ಹಾರೈಸಿದರು.