Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ ಬಡಾಕೆರೆ ಸೊಸೈಟಿ: ಸಾಮಾಜಿಕ ಅಂತರ ಕಾಯ್ದುಕೊಂಡು ಪಡಿತರ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಡಿತರ ವಿತರಣೆ ಮಾಡಲಾಗುತ್ತಿದೆ.

ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರ ಮಾರ್ಗದರ್ಶನದಲ್ಲಿ ಪಡಿತರ ವಿತರಿಸುವ ಎಲ್ಲಾ ಶಾಖೆಗಳಲ್ಲಿಯೂ ಪ್ರತಿದಿನ ವಾರ್ಡುವಾರು ಜನರಿಗೆ ಬರಲು ತಿಳಿಸಲಾಗಿದ್ದು ಅದರಂತೆಯೇ ವಿತರಲಿಸಲಾಗುತ್ತಿದೆ. ಯಾವುದೇ ಗೊಂದಲವಿಲ್ಲದೇ ಜನರು ಪಡಿತರ ಪಡೆಯುತ್ತಿರುವುದು ಸಾರ್ವಜನಿಕರ ಮೆಚ್ಚುಗೆಗೂ ಪಾತ್ರವಾಗಿದೆ.

Exit mobile version