Kundapra.com ಕುಂದಾಪ್ರ ಡಾಟ್ ಕಾಂ

ಶಿರಿಯಾರ, ಯಡ್ಯಾಡಿ- ಮತ್ಯಾಡಿ: ಅಗತ್ಯವುಳ್ಳವರಿಗೆ ದಿನಸಿ ಸಾಮಾಗ್ರಿ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ತಾಲೂಕಿನ ಶಿರಿಯಾರ ಹಾಗೂ ಕುಂದಾಪುರ ತಾಲೂಕಿನ ಯಡ್ಯಾಡಿ- ಮತ್ಯಾಡಿ ಗ್ರಾಮದಲ್ಲಿ ನೆಲೆಸಿರುವ ಕುಟುಂಬಗಳಿಗೆ, ಭಂಡಾರ್‌ಕಾರ‍್ಸ್ ಕಾಲೇಜು 93-94ರ ಸಾಲಿನ ಪಿಯುಸಿ ಸ್ನೇಹಿತರು ದಿನಸಿ ಸಾಮಾಗ್ರಿಗಳನ್ನು ವಿತರಿಸಿದರು.

ಕೊಲ್ಲುಕೋರೆ ಕೆಲಸ ಮಾಡಿಕೊಂಡಿದ್ದ ತಮಿಳುನಾಡು ಮೂಲದ ಕುಟುಂಬಗಳು ದಿನದ ದುಡಿಮೆಯನ್ನೇ ನಂಬಿ ಬದುಕುತ್ತಿದ್ದು, ಲಾಕ್‌ಡೌನ್ ಬಳಿಕ ಅವರ ಸ್ಥಿತಿ ದುಸ್ಥರವಾಗಿರುವುದನ್ನು ಅರಿತು ೨೫ ಕುಟುಂಬಗಳಿಗೆ ಅಗತ್ಯ ದಿನಸಿ ಸಾಮಾಗ್ರಿಗಳನ್ನು ವಿತರಿಸಲಾಯಿತು.

Exit mobile version