ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಅವರು ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಫೇಸ್ಮಾಸ್ಕ್ಗಳನ್ನು ಉಚಿತವಾಗಿ ನೀಡಿದ್ದು, ಸೋಮವಾರ ಕರೋನ ತಡೆಗಟ್ಟಲು ನಿರಂತರವಾಗಿ ಶ್ರಮಿಸುತ್ತಿರುವ ಬೈಂದೂರು ಸಾರ್ವಜನಿಕ ಆಸ್ಪತ್ರೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಬೈಂದೂರಿನಲ್ಲಿರುವ ವಲಸೆ ಕಾರ್ಮಿಕರಿಗೆ ಹಸ್ತಾಂತರಿಸಿದರು.
ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದೀಪಕ್ಕುಮಾರ್ ಶೆಟ್ಟಿ ಮಾಸ್ಕ್ಗಳನ್ನು ವಿತರಿಸಿದರು. ಸಂಸದರ ಬೈಂದೂರು ಕಛೇರಿ ಆಪ್ತ ಸಹಾಯಕ ಶಿವಕುಮಾರ್ ಇದ್ದರು.