Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಆರೋಗ್ಯ ಸಿಬ್ಬಂದಿಗಳಿಗೆ ಆಹಾರ ಕಿಟ್ ಹಾಗೂ ಪ್ರೋತ್ಸಾಹಧನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಹಾಗೂ ಶಿರೂರು ಎಂ.ಎಂ ಹೌಸ್ ವತಿಯಿಂದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಸುಮಾರು 65 ಆಶಾ ಕಾರ್ಯಕರ್ತರು, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ನರ್ಸ್‌ಗಳು ಹಾಗೂ ಇತರ ಸಿಬ್ಬಂಧಿಗಳಿಗೆ ಆಹಾರ ಸಾಮಾಗ್ರಿ ಕಿಟ್ ಹಾಗೂ ಪ್ರೋತ್ಸಾಹಧನವನ್ನು ವಿತರಿಸಲಾಯಿತು.

ಈ ಸಂದರ್ಭ ಕುಂದಾಪುರ ಎಎಸ್ಪಿ ಹರಿರಾಂ ಶಂಕರ್, ವೈದ್ಯಾಧಿಕಾರಿ ಪ್ರೇಮಾನಂದ್, ಪೊಲೀಸ್ ವೃತ್ತನಿರೀಕ್ಷಕ ಸುರೇಶ್ ನಾಯ್ಕ್, ಎಸ್ಪೈ ಸಂಗೀತಾ, ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ, ಶಿರೂರು ಎಂಎಂ ಹೌಸ್ ಮಣಿಗಾರ್ ಜಿಘ್ರಿ, ಗಿರೀಶ್ ಬೈಂದೂರು ಮೊದಲಾದವರು ಇದ್ದರು.

Exit mobile version