Kundapra.com ಕುಂದಾಪ್ರ ಡಾಟ್ ಕಾಂ

ಕರಾವಳಿ ಕಾವಲು ಪೊಲೀಸ್ ಠಾಣೆ ಸಿಬ್ಬಂದಿಗಳಿಂದ ಸೋಮೇಶ್ವರ ಬೀಚ್ ಸ್ವಚ್ಛತಾ ಕಾರ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ, ಅರಣ್ಯ ಇಲಾಖೆ ಬೈಂದೂರು ನೇತೃತ್ವದಲ್ಲಿ ಪಡುವರಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಶುಕ್ರವಾರ ಸೋಮೇಶ್ವರ ಬೀಚ್ ಸ್ವಚ್ಛತಾ ಕಾರ್ಯ ನಡೆಯಿತು.

ಗಂಗೊಳ್ಳಿ ಕರಾವಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೀಪ್ ಜಿ. ಎಸ್. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಬ್ ಇನ್ಸ್‌ಪೆಕ್ಟರ್ ಭಾಸ್ಕರ್ ಬೈಂದೂರು, ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:
► ಸ್ವಚ್ಛತೆಗೆ ಪ್ರಾಶಸ್ತ್ಯ ನೀಡುವುದರಿಂದ ಸಮಾಜದಲ್ಲಿ ಗುಣಾತ್ಮಕ ಬದಲಾವಣೆ: ಸಂದೀಪ ಜಿ. ಎಸ್ – https://kundapraa.com/?p=35688 .

Exit mobile version