Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಪೊಲೀಸರಿಗೆ ಸ್ಯಾನಿಟೈಸರ್, ಮಾಸ್ಕ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯುವುದರ ಜತೆಗೆ ಆ ಸಂಬಂಧಿ ಸುರಕ್ಷತಾ ಕಾರ್ಯದಲ್ಲಿ ಅವಿರತ ಶ್ರಮಿಸುತ್ತಿರುವ ಬೈಂದೂರು ಸರ್ಕಲ್, ಹೈವೇ ಪ್ಯಾಟ್ರೋಲ್ ಮತ್ತು ಠಾಣೆ ಸಿಬ್ಬಂದಿಗೆ ಕೆರ್ಗಾಲು ಶ್ರೀ ಭಗವತಿ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಬಿ. ಎಸ್. ಶ್ಯಾನುಭೋಗ್ ಸ್ಯಾನಿಟೈಸರ್, ಮಾಸ್ಕ್ ಮತ್ತು ಕುಡಿಯುವ ನೀರಿನ ಬಾಟಲಿಗಳನ್ನು ಮಂಗಳವಾರ ಹಸ್ತಾಂತರಿಸಿ ಬೈಂದೂರು ಪ್ರದೇಶದಲ್ಲಿ ಅವರ ಕಾರ್ಯನಿರ್ವಹಣೆಗೆ ಮೆಚ್ಚುಗೆ ಸೂಚಿಸಿದರು.

ಸಾಮಗ್ರಿಗಳನ್ನು ಸ್ವೀಕರಿಸಿದ ಸರ್ಕಲ್ ಇನ್ಸ್‌ಪೆಕ್ಟರ್ ಸುರೇಶ ಜಿ. ನಾಯಕ್ ಮತ್ತು ಸಬ್ ಇನ್ಸ್‌ಪೆಕ್ಟರ್ ಸಂಗೀತಾ ತಮ್ಮ ಮತ್ತು ಸಿಬ್ಬಂದಿ ಪರವಾಗಿ ಕೃತಜ್ಞತೆ ಸಲ್ಲಿಸಿದರು. ಶ್ರೀ ಭಗವತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ. ಪುಂಡಲೀಕ ನಾಯಕ್, ಸಂದೀಪ್ ಭಗವತಿ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.

ಇದನ್ನೂ ಓದಿ:
► ಉಡುಪಿ ಜಿಲ್ಲೆ: ಮಂಗಳವಾರ ಮಧ್ಯಾಹ್ನ 3 ಪಾಸಿಟಿವ್. ಒಟ್ಟು 111ಕ್ಕೆ ಏರಿಕೆ – https://kundapraa.com/?p=37916 .

 

Exit mobile version