Site icon Kundapra.com ಕುಂದಾಪ್ರ ಡಾಟ್ ಕಾಂ

ಕೊರೋನಾ ಮಹಾಸ್ಪೋಟ: ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 210 ಪಾಸಿಟಿವ್: ಸಚಿವ ಆರ್. ಅಶೋಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮಂಗಳವಾರ ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 210 ಜನರಿಗೆ ಸೋಂಕು ದೃಢವಾಗಿರುವ ಬಗ್ಗೆ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಆರ್ ಅಶೋಕ್, ಉಡುಪಿಯಲ್ಲಿ ಇಂದು 210 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ಧೃಡವಾಗಿದೆ. ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲೇ ಹೆಚ್ಚಿನ ಸೋಂಕು ಕಾಣಿಸಿಕೊಳ್ಳುrತ್ತಿರುವ ಕಾರಣ, ಮಹಾರಾಷ್ಟ್ರ ದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ಹೇಳಿದರು.

ಜಿಲ್ಲೆಯಲ್ಲಿ ಈವರೆಗೆ 260 ಕೋವಿಡ್19 ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದಿನ 210 ಹೊಸ ಪ್ರಕರಣಗಳು ಕಾರಣದಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 470ಕ್ಕೆ ಏರಿಕೆ ಕಾಣಲಿದೆ./ಕುಂದಾಪ್ರ ಡಾಟ್ ಕಾಂ ಸುದ್ದಿ/

► ಹೆಚ್ಚುತ್ತಿರುವ ಕೊರೋನಾ ಸೋಂಕು, ಆತಂಕ. ಜಿಲ್ಲಾಡಳಿತದ ಕೈಮೀರುತ್ತಿದೆಯೇ ಕೊರೋನಾ ನಿಯಂತ್ರಣ? – https://kundapraa.com/?p=38142 .

Exit mobile version