ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಲಾಕ್ಡೌನ್ ಸಂತ್ರಸ್ಥರ ಪರಿಹಾರಕ್ಕಾಗಿ ಆಗ್ರಹಿಸಿ, ಕರೋನ ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರದ ವೈಪಲ್ಯವನ್ನು ಖಂಡಿಸಿ ಮಂಗಳವಾರ ಕುಂದಾಪುರದಲ್ಲಿ ಸಿಪಿಐ(ಎಂ) ಕುಂದಾಪುರ ವಲಯ ಸಮಿತಿಯಿಂದ ಕಾರ್ಮಿಕ ಭವನದ ಬಳಿ ಹಾಗೂ ಬೈಂದೂರು ವಲಯ ಸಮಿತಿಯಿಂದ ಬೈಂದೂರು ಸಿಪಿಐ(ಎಂ) ಕಛೇರಿ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಎಲ್ಲಾ ದುಡಿಯುವ ವರ್ಗವರಿಗೆ ಮಾಸಿಕ ರೂ.7,500 ರಂತೆ ಕೊರೋನಾ ಪರಿಹಾರ ಒದಗಿಸಿಕೊಡಬೇಕು, ಪ್ರತಿಯೊಬ್ಬರಿಗೂ ಹೆಚ್ಚುವರಿ ರೇಷನ್ ರೇಷನ್ ಹಾಗೂ ನರೇಗಾ ಕೂಲಿ ಕಾರ್ಮಿಕರಿಗೆ 200 ದಿನಗಳ ಕೆಲಸ ನೀಡುವಂತೆ ಆಗ್ರಹಿಸಲಾಯಿತು.
ಕುಂದಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಿಪಿಐ(ಎಂ) ಕಾರ್ಯದರ್ಶಿ ಎಚ್. ನರಸಿಂಹ, ಬೈಂದೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ವಲಯ ಸಮಿತಿ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿದರು. ಪ್ರತ್ಯೇಕ ಪ್ರತಿಭಟನೆಯಲ್ಲಿ ರಾಜ್ಯ ಮುಖಂಡರಾದ ಕೆ. ಶಂಕರ್, ಮಹಾಬಲ ವಡೇರಹೋಬಳಿ, ವೆಂಕಟೇಶ ಕೋಣಿ, ರಾಜೀವ ಪಡುಕೋಣೆ, ನಾಗರತ್ನ ನಾಡ, ಗಣೇಶ್ ತೊಂಡೆಮಕ್ಕಿ ಮೊದಲಾದವರು ಭಾಗವಹಿಸಿದ್ದರು.
ಇದನ್ನೂ ಓದಿ:
► ಬೆಂಗಳೂರಿನಿಂದ ಕೋಟೇಶ್ವರಕ್ಕೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25ವರ್ಷದ ಟೆಕ್ಕಿ ಸಾವು – https://kundapraa.com/?p=38668 .
► ಉಡುಪಿ ಜಿಲ್ಲೆ: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ 14,034 ಮಂದಿ ವಿದ್ಯಾರ್ಥಿಗಳು – https://kundapraa.com/?p=38652 .