Kundapra.com ಕುಂದಾಪ್ರ ಡಾಟ್ ಕಾಂ

ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಟ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೇಂದ್ರ ಸರಕಾರದ ತೆರವು ಮಾರ್ಗಸೂಚಿ ಅಗಸ್ಟ್ 31ರ ತನಕ ಜಾರಿಯಲ್ಲಿದ್ದು, ಯಾವುದೇ ಧಾರ್ಮಿಕ ಆಚರಣೆಗಳಿಗೆ ಅನುಮತಿ ಇಲ್ಲದಿರುವುದರಿಂದ ಗಣೇಶ ಚತುರ್ಥಿ ಹಬ್ಬವನ್ನು ಸಾರ್ವಜನಿಕವಾಗಿ ನಡೆಸುವಂತಿಲ್ಲ. ಮನೆಯಲ್ಲೇ ಅಥವಾ ದೇವಸ್ಥಾನದಲ್ಲಿ ಸರಳವಾಗಿ ಸರಕಾರದ ಮಾರ್ಗಸೂಚಿ ಅನ್ವಯ ಆಚರಿಸಲು ಅವಕಾಶ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ರಾಜ್ಯ ಸರಕಾರದ ಮಾರ್ಗಸೂಚಿ:

ಹಬ್ಬ ಆಚರಣೆಯ ಸಂದರ್ಭ ಸ್ಥಳೀಯಾಡಳಿತ/ಪೊಲೀಸ್ ಇಲಾಖೆ ಸೇರಿದಂತೆ ಸರಕಾರ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿ ಶಾಂತಿಯುತವಾಗಿ ಹಬ್ಬ ಆಚರಿಸುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

Exit mobile version