Kundapra.com ಕುಂದಾಪ್ರ ಡಾಟ್ ಕಾಂ

ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ: ಕರೋನಾ ಜನ ಜಾಗೃತಿ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಲಿ. ಕುಂದಾಪುರ ಶಾಖೆ ವತಿಯಿಂದ ಹಮ್ಮಿಕೊಂಡ ಕರೋನಾ ಜನ ಜಾಗೃತಿ ಅಭಿಯಾನಕ್ಕೆ ಕುಂದಾಪುರದ ಮಿನಿ ವಿಧಾನಸೌಧದಲ್ಲಿ ತಹಸೀಲ್ದಾರ್ ಆನಂದಪ್ಪ ನಾಯಕ್ ಹಾಗೂ ಕುಂದಾಪುರ ಠಾಣಾಧಿಕಾರಿ ಹರೀಶ್ ಆರ್. ನಾಯ್ಕ್ ಚಾಲನೆ ನೀಡಿದರು.

ಈ ಸಂದರ್ಭ ಕುಂದಾಪುರ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಕುಂದಾಪುರ ಶಾಖಾ ವ್ಯವಸ್ಥಾಪಕ ಜಾನ್ಸನ್ ಮೇನೇಜಸ್, ಕಲ್ಯಾಣಪುರ ಶಾಖಾ ವ್ಯವಸ್ಥಾಪಕ ರೋಹಿತ್ ರೊಡ್ರಿಗಸ್ ಹಾಗೂ ಕುಂದಾಪುರ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version