ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಿತ್ತೂರು ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಚಿತ್ತೂರು ಪ್ರೌಢಶಾಲೆ ಮತ್ತು ಚಿತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ವನಮಹೋತ್ಸವ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು.
ಚಿತ್ತೂರು ವಲಯ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ವಂಡಬಳ್ಳಿ ಜಯರಾಮ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಚಿತ್ತೂರು ವಲಯ ಮೇಲ್ವಿಚಾರಕ ಪ್ರಭಾಕರ, ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ ಮಡಿವಾಳ, ಒಕ್ಕೂಟದ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ನಾಗೇಂದ್ರ ಆಚಾರ್ಯ, ನಿಕಟಪೂರ್ವಧ್ಯಕ್ಷ ದಿವಾಕರ ಆಚಾರ್ಯ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ತಾರಾ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ನಾರಾಯಣ ಶೆಟ್ಟಿ, ಸೇವಾ ಪ್ರತಿನಿಧಿ ಮಮತಾ, ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.