Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು: ವನಮಹೋತ್ಸವ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಇಕೋ ಕ್ಲಬ್, ಐಕ್ಯೂಎಸಿ ಹಾಗೂ ಬೈಂದೂರು ವಲಯ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಬೈಂದೂರು ಉಪವಲಯ ಅರಣ್ಯಾಧಿಕಾರಿ ಶಂಕರಪ್ಪ ಡಿ.ಎಲ್  ಬೈಂದೂರು ಇವರು ಸಸಿ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ  ರಘು ನಾಯ್ಕ್,  ಅರಣ್ಯ ರಕ್ಷ ಕ ಮಂಜುನಾಥ ನಾಯ್ಕ್ , ಗುರುರಾಜ್ ಬಿ ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಘಟಕ-2 ರ ಯೋಜನಾಧಿಕಾರಿ ಲತಾ ಪೂಜಾರಿ  ಸ್ವಾಗತಿಸಿದರು. ಇಕೋ ಕ್ಲಬ್ ಹಾಗೂ ಐಕ್ಯೂಎಸಿ ಸಂಚಾಲಕ ಡಾ.  ಅಶ್ವಥ್ ಡಿ ನಾಯ್ಕ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಘಟಕ-1 ರ ಯೋಜನಾಧಿಕಾರಿ ನಾಗರಾಜ್ ಶೆಟ್ಟಿ ವಂದಿಸಿದರು. ಈ ವೇಳೆಯಲ್ಲಿ ಎಲ್ಲ ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು

ನಾಯ್ಕ್

Exit mobile version