Kundapra.com ಕುಂದಾಪ್ರ ಡಾಟ್ ಕಾಂ

ಅಫಘಾತದಲ್ಲಿ ಪತ್ರಕರ್ತನಿಗೆ ಗಾಯ

ಕುಂದಾಪುರ: ಇಲ್ಲಿನ ತಲ್ಲೂರು ಸೇತುವೆ ಬಳಿ ಶನಿವಾರ ರಾತ್ರಿ ಕುಂದಾಪುರದಿಂದ ಹೆಮ್ಮಾಡಿಯತ್ತ ಸಾಗುತ್ತಿದ್ದ ಕಾರಿಗೆ ಸರಕು ಲಾರಿಯೊಂದು ಮುಖಾಮುಖೀ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಂದಾಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಕೇರಳದತ್ತ ಸಾಗುತ್ತಿದ್ದ ಸರಕು ಲಾರಿ ಟೊಯೊಟಾ ಕಾರಿಗೆ ಢಿಕ್ಕಿಹೊಡೆದ ಪರಿಣಾಮ ಕಾರಿನ ಮುಂಭಾಗ ಮತ್ತು ಬಲ ಮತ್ತು ಎಡ ಭಾಗದ ಬಾಗಿಲುಗಳು ತೆರೆದುಕೊಂಡಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ.

ಅಪಘಾತದಿಂದಾಗಿ ಕೆಲ ಕಾಲ ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅಡಚನೆಯಾಯಿತು. ಕುಂದಾಪುರ ಸಂಚಾರಿ ಪೊಲೀಶರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version