Kundapra.com ಕುಂದಾಪ್ರ ಡಾಟ್ ಕಾಂ

ವಿಶ್ವಕರ್ಮ ಮಹಾಸಭಾ ಜಿಲ್ಲಾಧ್ಯಕ್ಷರಾಗಿ ನೇರಂಬಳ್ಳಿ ರಮೇಶ್‌ ಆಚಾರ್ಯ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಜಿಲ್ಲಾಧ್ಯಕ್ಷರಾಗಿ ಕುಂದಾಪುರದ ನೇರಂಬಳ್ಳಿ ರಮೇಶ್‌ ಆಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ.

ಮಹಾಸಭಾದ ಕರಾವಳಿ ಜಿಲ್ಲೆಗಳ ಉಸ್ತುವಾರಿಯಾಗಿರುವ ಮಾಧ್ಯಮ ವಕ್ತಾರ ಮಾರುತಿ ಬಡಿಗೇರ್‌ರಾಯಚೂರು ಅವರ ಶಿಫಾರಸ್ಸಿನಂತೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಧ್ಯಕ್ಷರಾದ ವಿಧಾನ ಪರಿಷತ್‌ಸದಸ್ಯ ಕೆ. ಪಿ. ನಂಜುಂಡಿ ವಿಶ್ವಕರ್ಮ ಅವರು ನೇಮಕ ಮಾಡಿದ್ದಾರೆ.

ಉದ್ಯಮಿಯಾಗಿರುವ ರಮೇಶ ಆಚಾರ್ಯ ಸಮಾಜಸೇವಕರಾಗಿ ಸಕ್ರೀಯರಾಗಿ ಬೀಜಾಡಿ ಗೋಪಾಡಿ ಮಿತ್ರ ಸಂಘಮದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Exit mobile version