Kundapra.com ಕುಂದಾಪ್ರ ಡಾಟ್ ಕಾಂ

ನರೇಂದ್ರ ಎಸ್. ಗಂಗೊಳ್ಳಿಗೆ ಬಹುಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:  ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಲ್ಕೂರ ಪ್ರತಿಷ್ಠಾನ ಏರ್ಪಡಿಸಿದ್ದ ಕಾರಂತರ ಕುರಿತಾದ ಪ್ರಬಂಧ ಸ್ಪರ್ಧೆಯ ಮುಕ್ತ ವಿಭಾಗದಲ್ಲಿ ಉಪನ್ಯಾಸಕ ಮತ್ತು ಬರಹಗಾರ ನರೇಂದ್ರ ಎಸ್. ಗಂಗೊಳ್ಳಿಗೆ ದ್ವಿತೀಯ ಬಹುಮಾನ ಮತ್ತು ಜನಶಕ್ತಿ ವೆಬ್ ಪತ್ರಿಕೆಯ ಲೋಕಾರ್ಪಣೆ ಸಂದರ್ಭದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ.

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Exit mobile version