Kundapra.com ಕುಂದಾಪ್ರ ಡಾಟ್ ಕಾಂ

ಅ.17 – 26: ಶ್ರೀ ಬಗಳಾಂಬ ತಾಯಿ ಶರನ್ನವರಾತ್ರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಅ. 17 ರಿಂದ 26ರವರೆಗೆ ಗುರುಪರಾಶಕ್ತಿ ಮಠ, ಮರಕಡದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳವರ ಅನುಗ್ರಹದೊಂದಿಗೆ ವೇದಮೂರ್ತಿ ಕೆ. ಚಂದ್ರಶೇಖರ ಸೋಮಯಾಜಿಯವರ ನೇತೃತ್ವದಲ್ಲಿ ಜರುಗಲಿದೆ.

ಅ. 17 ರಂದು ಕಲಶ ಸ್ಥಾಪನೆ, ಅ. 24 ರಂದು ಗಣಪತಿ ಪೂಜೆ, ಚಂಡಿಕಾಯಾಗ, ಮಹಾಪೂಜೆ, ಅನ್ನಸಂತರ್ಪಣೆ ಅ.25 ರಂದು ರಾತ್ರಿ ರಂಗ ಪೂಜೆ ಅ. 26 ರಂದು ಕಲಶ ವಿಸರ್ಜನೆ ನಡೆಯಲಿದೆ. ಪ್ರತಿದಿನ ಸಂಜೆ 7 ರಿಂದ ವಿವಿಧ ತಂಡಗಳಿಂದ ಭಜನೆ ನಡೆಯಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀದೇವಿಯ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಿ, ತಾಯಿಯ ಕೃಪೆಗೆ ಪಾತ್ರರಾಗುವಂತೆ ಆಡಳಿತ ಮಂಡಳಿ ಹಾಗೂ ಉತ್ಸವ ಸಮಿತಿ ವಿನಂತಿಸಿದೆ.

Exit mobile version