Kundapra.com ಕುಂದಾಪ್ರ ಡಾಟ್ ಕಾಂ

ಅ.31ರಂದು ಜನಾಧಿಕಾರ ಪುಸ್ತಕ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪತ್ರಕರ್ತ, ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಅವರು ಸಂಕಲಿಸಿ, ಜನಪ್ರತಿನಿಧಿ ಪ್ರಕಾಶನ ಪ್ರಕಟಿಸಿರುವ ’ಜನಾಧಿಕಾರ’ ಗ್ರಾಮ ಪಂಚಾಯಿತಿ ಮಾರ್ಗದರ್ಶಿ ಪುಸ್ತಕ ಅ31ರ ಬೆಳಿಗ್ಗೆ 10 ಗಂಟೆಗೆ ಇಲ್ಲಿನ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಬಿಡುಗಡೆಗೊಳ್ಳಲಿದೆ.

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದಾರೆ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ತಿದ್ದುಪಡಿ ಸಮಿತಿ ಸದಸ್ಯ ಟಿ. ಬಿ. ಶೆಟ್ಟಿ ಪುಸ್ತಕದ ಕುರಿತು ಅನಿಸಿಕೆ ವ್ಯಕ್ತಪಡಿಸಲಿದ್ದಾರೆ ಎಂದು ಪ್ರಕಾಶಕ, ಜನಪ್ರತಿನಿಧಿ ಬಳಗದ ಸುಬ್ರಹ್ಮಣ್ಯ ಪಡುಕೋಣೆ ತಿಳಿಸಿದ್ದಾರೆ.

ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ

 

Exit mobile version