Kundapra.com ಕುಂದಾಪ್ರ ಡಾಟ್ ಕಾಂ

ಚೈತನ್ಯ ವೃದ್ಧಾಶ್ರಮಕ್ಕೆ ಊಟದ ಅಕ್ಕಿ ದೇಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ವಿಶ್ವ ಲಯನ್ಸ್ ಸೇವಾ ಸಪ್ತಾಹದ ಅಂಗವಾಗಿ ನಡೆಸಿರುವಂತಹ ರಿಲೀವ್ ದ ಹಂಗರ್ ಕಾರ್ಯಕ್ರಮದ ಅಂಗವಾಗಿ ಸಿಸಿಲಿ ಕೋಟ್ಯಾನ್ ರವರು ನಡೆಸಿಕೊಂಡು ಬರುತ್ತಿರುವ ಚೈತನ್ಯ ವೃದ್ಧಾಶ್ರಮಕ್ಕೆ ಅವಶ್ಯಕತೆ ಇರುವಂತಹ ಊಟದ ಅಕ್ಕಿಯನ್ನು ಲಯನ್ಸ್ ಕ್ಲಬ್ ಕುಂದಾಪುರ ವತಿಯಿಂದ ನೀಡಿರುತ್ತಾರೆ.

ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಲಯನ್ ಚಂದ್ರಶೇಖರ್ ಕಲ್ಪತರು, ಲಯನ್ ರಾಜೀವ್ ಕೋಟ್ಯಾನ್, ಲಯನ್ ನವೀನ್ ಕುಮಾರ್ ಶೆಟ್ಟಿ, ಲಯನ್ ವೇಣುಗೋಪಾಲ ಶೆಟ್ಟಿ ಹಾಗೂ ಸಂಸ್ಥೆಯ ಸಿಸಿಲಿ ಕೋಟ್ಯಾನ್ ಉಪಸ್ಥಿತರಿದ್ದರು.

Exit mobile version