Kundapra.com ಕುಂದಾಪ್ರ ಡಾಟ್ ಕಾಂ

ಕರ್ನಾಟಕ ಜಾನಪದ ಭೂಷಣ ಪ್ರಶಸ್ತಿಗೆ ಗಣೇಶ ಗಂಗೊಳ್ಳಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಬೀದರ್ ಜಿಲ್ಲೆಯ ದೇಶಪಾಂಡೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಮಂದಾರ ಕಲಾವಿದರ ವೇದಿಕೆ ಜಂಟಿಯಾಗಿ ನೀಡುವ ಕರ್ನಾಟಕ ಜಾನಪದ ಭೂಷಣ ಪ್ರಶಸ್ತಿಗೆ ಗಂಗೊಳ್ಳಿಯ ಖ್ಯಾತ ಗಾಯಕ ಹಾಗೂ ಉಡುಪಿ ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಗಣೇಶ ಗಂಗೊಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ.

ಮುಂದಿನ ಮಾರ್ಚ್‌ನಲ್ಲಿ ಬೀದರ್‌ನಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಜಿ. ದೇಶಪಾಂಡೆ ಪ್ರಕಟಿಸಿದ್ದಾರೆ

Exit mobile version