Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಡಾ. ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಡಾ. ಅಂಬೇಡ್ಕರ್ ಯುವಕ ಮಂಡಲ , ಅಮೃತ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಳಿ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಭವನದಲ್ಲಿ ಬಿ.ಆರ್ ಅಂಬೇಡ್ಕರ್. ಅವರ 64ನೇ ವರುಷದ ಪರಿನಿರ್ವಾಣ ದಿನಾಚರಣೆ ನಡೆಯಿತು.

ಯುವಕ ಮಂಡಲದ ಅಧ್ಯಕ್ಷ ನಟರಾಜ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಸಂಸ್ಥೆಯ ಗೌರವ ಅಧ್ಯಕ್ಷರಾದ ಭಾಸ್ಕರ್ ಹೆಚ್. ಜಿ, ಕಾರ್ಯದರ್ಶಿ ಸಂದೀಪ್, ಶಶಿ ದೀಪ ಕೆ,ಶಂಕರ, ಮಹಿಳಾ ಮಂಡಲದ ಅನಿತಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಸಂಯೋಜಕಿ ರಾಧಾ ಮೊದಲಾದವರು ಉಪಸ್ಥಿತರಿದ್ದರು.

Exit mobile version