Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಟ್ರಸ್ಟ್ ನಾವುಂದ: ನೂತನ ಅಧ್ಯಕ್ಷರ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಟ್ರಸ್ಟ್ ನಾವುಂದ ಗರಡಿಯ ಆಡಳಿತ ಮೊಕ್ತೇಸರ ಹಾಗೂ ಕಾರ್ಯದರ್ಶಿ ಶೇಖರ ಎಮ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿದ ಗರಡಿಯ ಆಡಳಿತ ಸಮಿತಿಯ ಸಭೆಯಲ್ಲಿ ಗರಡಿಯ ಮುಂಬೈ ಕಮಿಟಿಯ ಈಗಿನ ಅಧ್ಯಕ್ಷರಾಗಿರುವ ಡಾ. ಎನ್ ಕೆ ಬಿಲ್ಲವ ಇವರನ್ನು ಬ್ರಹ್ಮ ಬೈದರ್ಕಳ ಗರಡಿ ಟ್ರಸ್ಟ್ ನಾವುಂದ ಇದರ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಹಾಗೂ ಉಪಾಧ್ಯಕ್ಷರಾಗಿ ಗರಡಿ ಮನೆಯ ನಾಗೇಶ್ ಪಿ ಪೂಜಾರಿ ಇವರನ್ನು ಆಯ್ಕೆ ಮಾಡಲಾಯಿತು, ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಮುತ್ತ ಬಿಲ್ಲವ ಇವರನ್ನು ಗೌರವಿಸಿದರು.

ಗರಡಿಯ ಬಲ್ಲಾಳ ಚಂದ್ರಶೇಖರ ಶೆಟ್ಟಿ, ನಿವೃತ್ತ ಶಿಕ್ಷಕ ಸೀತಾರಾಮ ಪೂಜಾರಿ, ಆರ್ ಕೆ ಬಿಲ್ಲವ, ರಾಜು ಪೂಜಾರಿ ಬಾಳಿತ್ಲು, ಮೋಹನ ಪೂಜಾರಿ ಬಾಳಿತ್ಲು ಉಪಸ್ಥಿತರಿದ್ದರು. ತಾಲೂಕು ಪಂಚಾಯತಿ ಸದಸ್ಯ ಹಕ್ಕಾಡಿ ಜಗದೀಶ ಪೂಜಾರಿ, ರಾಜೀವ ಶೆಟ್ಟಿ ನೂತನ ಅಧ್ಯಕ್ಷರಿಗೆ ಅಭಿನಂದಿಸಿದರು.

Exit mobile version