Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಶ್ರೀ ಬಗಳಾಂಬ ತಾಯಿ ದೀಪೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ದೀಪೋತ್ಸವವು ಕೋಟ ಚಂದ್ರಶೇಖರ ಸೋಮಯಾಜಿ ಅವರ ಮಾರ್ಗದರ್ಶನದಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.

ದುರ್ಗಾಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಶ್ರೀ ಮಾಸ್ತಿಯಮ್ಮ ಭಜನಾ ಮಂಡಳಿ ಮದ್ದುಗುಡ್ಡೆಯವರಿಂದ ಭಜನೆ, ರಾತ್ರಿ ರಂಗಪೂಜೆ ಸೇವೆಗಳು ಅಚ್ಚು ಕಟ್ಟಾಗಿ ನಡೆಯಿತು. ಭದ್ರತಾ ವ್ಯವಸ್ಥೆಗೆ ಸೈರನ್ ಕೊಡುಗೆ ನೀಡಿದ ದಾನಿಗಳನ್ನು ಗೌರವಿಸಲಾಯಿತು. ದೇವಳದ ಅರ್ಚಕ ಗಣಪತಿ ಸುವರ್ಣ, ಜಲಜ ಸುವರ್ಣ, ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಸೀತಾರಾಮ ಹೇರಿಕುದ್ರು, ಅಧ್ಯಕ್ಷರಾದ ಪ್ರಕಾಶ್ ಕೆ. ಬಿ, ಚಂದ್ರಶೇಖರ್, ಜನಾರ್ಧನ, ರತ್ನಾಕರ ಆಡಳಿತ ಮಂಡಳಿ ಹಾಗೂ ಉತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Exit mobile version