Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪುಂದ ಮೂರ್ತೆದಾರರ ಸಹಕಾರಿ ಸಂಘದ ಮಹಾಸಭೆ, 32 ಲಕ್ಷ ರೂ. ಲಾಭ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ ಮೂರ್ತೆದಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ಶಂಕರ ಕಲಾ ಮಂದಿರದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಮೋಹನ ಪೂಜಾರಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ ರೂ.81.23 ಕೋಟಿ ವ್ಯವಹಾರ ನಡೆಸಿ, ರೂ 32.01ಲಕ್ಷ ನಿವ್ವಳ ಲಾಭ ಗಳಿಸಿದ್ದು, ಮುಂದಿನ ದಿನಗಳಲ್ಲಿ100 ಕೋಟಿ ರೂ. ವ್ಯವಹಾರದ ಗುರಿಯಿರಿಸಿಕೊಳ್ಳಲಾಗಿದೆ, ಸಂಘವು ಪ್ರಾರಂಭದಿಂದಲೂ ಲಾಭದಲ್ಲೆ ಮುನ್ನಡೆಯುತ್ತಿದ್ದು, ಕಳೆದ 28 ವರ್ಷಗಳಿಂದ ನಿರಂತರ ಡಿವಿಡೆಂಟ್ ನೀಡಿರುವ ಹೆಗ್ಗಳಿಕೆ ಗಳಿಸಿದೆ. ಪ್ರಧಾನ ಕಚೇರಿಗೆ ಸುಸಜ್ಜಿತವಾದ ಸಹಕಾರಿ ಸಂಕೀರ್ಣ ನಿರ್ಮಾಣ, ಸಂಘದ ಕಾರ್ಯ ಕ್ಷೇತ್ರದಲ್ಲಿ ಶಾಖೆ ತೆರೆಯುವುದು ಸೇರಿದಂತೆ ಹಲವು ಯೋಜನೆಗಳನ್ನು ಕಾರ್ಯಕತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಉಪಾಧ್ಯಕ್ಷ ತಿಮ್ಮಪ್ಪ ಪೂಜಾರಿ, ನಿರ್ದೇಶಕರಾದ ಹೆಚ್. ನರಸಿಂಹ ಪೂಜಾರಿ, ಬಿ. ನಾರಾಯಣ ಪೂಜಾರಿ, ಮಂಜ ಪೂಜಾರಿ, ರಾಜು ಪೂಜಾರಿ, ಶೇಷು ಪೂಜಾರಿ, ಸುರೇಶ ಪೂಜಾರಿ, ಸಂತೋಷ, ಶಾರದಾ, ಲಕ್ಷ್ಮೀ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಕಾರಿ ಮಹೇಶ್ ಹೆಚ್ ವಾರ್ಷಿಕ ವರದಿ, ಲೆಕ್ಕಪತ್ರ, ಮುಂದಿನ ವರ್ಷದ ಅಂದಾಜು ಆಯವ್ಯಯ ಪತ್ರ ಮಂಡಿಸಿದರು.

Exit mobile version