Kundapra.com ಕುಂದಾಪ್ರ ಡಾಟ್ ಕಾಂ

ಮೀನು ಮರಿಗಳ ಸಾಕಣಿಕಾ ಕೇಂದ್ರಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಪಡುವರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದುರ್ಮಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮೀನು ಮರಿಗಳ ಸಾಕಣಿಕಾ ಕೇಂದ್ರಕ್ಕೆ ಬಂದರು ಮತ್ತು ಮೀನುಗಾರಿಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.

ಮೀನು ಸಾಕಣಿಕಾ ಕೇಂದ್ರವು 1ಎಕರೆಗೂ ಹೆಚ್ಚು ವಿಸ್ತಾರವಿದ್ದು, 18 ಸಾವಿರಕ್ಕೂ ಅಧಿಕ ಮೀನು ಮರಿಗಳನ್ನು ಸಾಕುವ ಉದ್ದೇಶ ಹೊಂದಿದೆ ಎಂದರು.

ಈ ಸಂದರ್ಭ ಉದ್ಯಮಿ ಗೋವಿಂದ ಬಾಬು ಪೂಜಾರಿ, ಬೈಂದೂರು ತಾ.ಪಂ ಅಧ್ಯಕ್ಷ ಮಹೇಂದ್ರ ಪೂಜಾರಿ, ಜಿ.ಪಂ ಸದಸ್ಯ ಸುರೇಶ್ ಬಟ್ವಾಡಿ, ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಶಾಂತ ಪೂಜಾರಿ ಬೈಂದೂರು ಪಾಲುದಾರರಾದ ಗುರು ಪ್ರಸಾದ ಬೈಂದೂರು, ಸಂತೋಷ, ಗೌರೀಶ್ ಉಪ್ಪುಂದ ಉಪಸ್ಥಿತರಿದ್ದರು.

Exit mobile version