Site icon Kundapra.com ಕುಂದಾಪ್ರ ಡಾಟ್ ಕಾಂ

ಶಿರೂರು: ಲಾರಿಯಡಿ ಸಿಲುಕಿ ವ್ಯಕ್ತಿ ದುರ್ಮರಣ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಶಿರೂರು ನೀರ್ಗದ್ದೆ ಬಳಿ ನಡೆದ ಅಪಘಾತದಲ್ಲಿ ವ್ಯಕ್ತಿಯೋರ್ವ, ಲಾರಿಯಡಿಗೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.

ಮಂಗಳೂರಿನಿಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಬಾಗಲಕೋಟೆಗೆ ತೆರಳುತ್ತಿದ್ದ ವ್ಯಕ್ತಿ, ಘಟನೆಯಲ್ಲಿ ಮೃತಟ್ಟಿದ್ದಾರೆ. ಶಿರೂರು ನಿರ್ಗದ್ದೆ ಸಮೀಪ ಊಟಕ್ಕೆ ಬಸ್ ನಿಲ್ಲಿಸಿದಾಗ ಬಹಿರ್ದೇಸೆಗಾಗಿ ಹೆದ್ದಾರಿ ದಾಟುತ್ತಿದ್ದ ವೇಳೆ ಇಳಿಜಾರಿನಲ್ಲಿ ಕೋಕ್ ಲಾರಿ ಡಿಕ್ಕಿಯಾಗಿ ದೇಹ ಛಿದ್ರಗೊಂಡಿತ್ತು. ಮೃತ ವ್ಯಕ್ತಿಯನ್ನು ಬಾಗಲಕೋಟ ಜಿಲ್ಲೆ

ಹುಲಗುಂದ ತಾಲೂಕಿನ ಮೈಲಾರಪ್ಪ (60) ಎಂದು ಗುರುತಿಸಲಾಗಿದೆ. ಬೈಂದೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ಮೃತದೇಹವನ್ನು ತೆರವುಗೊಳಿಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version