Kundapra.com ಕುಂದಾಪ್ರ ಡಾಟ್ ಕಾಂ

ಯಡ್ತರೆ ನೇತಾಜಿ ಯುವಕ ಮಂಡಲದಿಂದ ಸ್ವಚ್ಚತಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ ಅಂಗವಾಗಿ ಯಡ್ತರೆ ನೇತಾಜಿ ಯುವಕ ಮಂಡಲದಿಂದ ಶನಿವಾರ ನೇತಾಜಿ ಮಾರ್ಗದ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಸ್ಥಳೀಯರಾದ ಅಣ್ಣಪ್ಪ ಪೂಜಾರಿ ಮಣ್ಣಿಮನೆ ನೇತಾಜಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪೋಟೊಗೆ ಪುಷ್ಪ ನಮನ ಸಲ್ಲಿಸಿದರು. ಯುವಕ ಮಂಡಲದ ಅಧ್ಯಕ್ಷ ರಾಘವೆಂದ್ರ ಪೂಜಾರಿ, ಕಾರ್ಯದರ್ಶಿ ವಿಶ್ವನಾಥ ದೇವಾಡಿಗ ಹಾಗೂ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

Exit mobile version