Kundapra.com ಕುಂದಾಪ್ರ ಡಾಟ್ ಕಾಂ

ಮನೆ ಮೇಲೆ ಭಾರೀ ಗಾತ್ರದ ಮರ ಉರುಳಿ ಅಪಾರ ಹಾನಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರೀ ಗಾಳಿಗೆ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ಅಪಾರ ಹಾನಿಯಾದ ಘಟನೆ ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದೂರು ಎಂಬಲ್ಲಿ ನಡೆದಿದೆ.

ಭಾರೀ ಗಾಳಿಗೆ ಮುದೂರು ಹಾರ್ಕೆ ನಿವಾಸಿ ಶ್ರೀಮತಿ ಗಾಣಿಗ ಎಂಬುವರ ವಾಸ್ತವ್ಯದ ಮನೆ ಮೇಲೆ ಭಾರೀ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಜಖಂಗೊಂಡಿದೆ. ಮನೆಯಲ್ಲಿದ್ದ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಸುಮಾರು1.5ಲಕ್ಷ ಕ್ಕೂ ಮಿಕ್ಕಿ ಹಾನಿ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.

ಘಟನೆಯ ಮಾಹಿತಿ ಪಡೆದ ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅವರು ತಹಶೀಲ್ದಾರ್ ಅವರನ್ನು ಸಂಪರ್ಕಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸೂಚನೆ ನೀಡಿದ್ದು, ಸರಕಾರದಿಂದ ಗರಿಷ್ಠ ಪರಿಹಾರ ನೀಡುವ ಭರವಸೆ ನೀಡಿದರು.

Exit mobile version