Kundapra.com ಕುಂದಾಪ್ರ ಡಾಟ್ ಕಾಂ

ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮೂಲಕ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 03, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01 ರಂತೆ ಮಾಸಿಕ 6000 ರೂ. ಗೌರವಧನದ ನೆಲೆಯಲ್ಲಿ ನಗರ ಪುನರ್ವಸತಿ ಕಾರ್ಯಕರ್ತ (ಯು.ಆರ್.ಡಬ್ಲೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಮಾಸಿಕ 6,000 ರೂ. ಗೌರವಧನದ ನೆಲೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲೂ) ನೇಮಕಾತಿಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

10 ನೇ ತರಗತಿ ಉತ್ತೀರ್ಣ/ಅನುತ್ತೀರ್ಣರಾಗಿದ್ದು, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ಗುರುತು ಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನರು, ತಮ್ಮ ವಾಸಸ್ಥಳ ವ್ಯಾಪ್ತಿಯ ಪುರಸಭೆ/ ಪಟ್ಟಣ ಪಂಚಾಯತ್/ ಗ್ರಾಮ ಪಂಚಾಯತ್‌ನಿಂದ ಪಡೆದ ವಾಸ್ತವ್ಯ ದೃಢೀಕರಣ ಪತ್ರ ಹಾಗೂ 3 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಫೆಬ್ರವರಿ 26 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪುರಸಭೆ/ ಪಟ್ಟಣ ಪಂಚಾಯತ್/ ತಾಲ್ಲೂಕು ಪಂಚಾಯತ್ ಮುಖ್ಯಸ್ಥರ ಆಯ್ಕೆ ಸಮಿತಿ ಮೂಲಕ ನಗರ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಯ ದೂ. ಸಂಖ್ಯೆ: 0820-2574810/ 2574811 ಅಥವಾ ಆಯಾ ತಾಲೂಕಿನ ತಾಲ್ಲೂಕು ಪಂಚಾಯತ್‌ನಲ್ಲಿರುವ ಎಂ.ಆರ್.ಡಬ್ಲೂಯ. (ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರು) ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version