Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಕಂದಾಯ, ಪೌತಿ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೋಬಳಿಗೆ ಸಂಬಂಧಿಸಿದಂತೆ ಕಂದಾಯ ಅದಾಲತ್/ ಪೌತಿ/ಪಿಂಚಣಿ ಅದಾಲತ್ ಕಾರ್ಯಕ್ರಮವು ಹಾಲಾಡಿ ಶಾಲಿನಿ ಜಿ ಶಂಕರ ಕನ್ವೆಂಷನ್ ಸೆಂಟರ್‌ನಲ್ಲಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾಯಕ್ರಮದಲ್ಲಿ ಕಂದಾಯ ಇಲಾಖೆಯ 94ಸಿ ಯೋಜನೆಯಡಿ 42 ಫಲಾನುಭವಿಗಳಿಗೆ ಹಕ್ಕುಪತ್ರ, ಸಾಮಾಜಿಕ ಭದ್ರತೆ ಯೋಜನೆಯಡಿ 108 ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶವನ್ನು ವಿತರಿಸಲಾಯಿತು. 67 ಪ್ರಕರಣಗಳಲ್ಲಿ ಪಿಂಚಣಿ ಅದಾಲತ್ ನಡೆಸಿ ಸ್ಥಳದಲ್ಲಿ ಪಿಂಚಣಿ ಮಂಜೂರಾತಿ ಮಾಡಲಾಯಿತು.

2268 ಪ್ರಕರಣಗಳಲ್ಲಿ ಪಹಣಿ ತಿದ್ದುಪಡಿಗೆ ಕ್ರಮವಹಿಸಲಾಯಿತು. 191 ಜಮೀನಿಗೆ ಸಂಬಂಧಪಟ್ಟಂತೆ ಪೌತಿ ಅದಾಲತ್ ಕಾರ್ಯಕ್ರಮದಲ್ಲಿ ಪೌತಿ ಖಾತಾ ಬದಲಾವಣೆಗೆ ಅರ್ಜಿ ಸ್ವೀಕರಿಸಲಾಯಿತು. 63 11ಇ ಪ್ರಕರಣಗಳ ಆಕಾರಬಂದ್ ಆರ್‌ಟಿಸಿ ಹೊಂದಾಣಿಕೆ ಮಾಡಿ ತಿದ್ದುಪಡಿಗೆ ಕ್ರಮ ವಹಿಸಲಾಯಿತು.

ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಸಹಾಯಕ ಕಮೀಷನರ್ ಕೆ.ರಾಜು, ತಹಶೀಲ್ದಾರ್ ಆನಂದಪ್ಪ ನಾಯಕ್ ಉಪಸ್ಥಿತರಿದ್ದರು.

Exit mobile version