ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೇಂದ್ರ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯವು ದೇಶದಾದ್ಯಂತ ರಾಷ್ಟ್ರೀಯ ಯುವ ಸ್ವಯಂ ಸೇವಕರು ಎಂಬ ಕಾರ್ಯಕ್ರಮವನ್ನು ನೆಹರು ಯುವ ಕೇಂದ್ರದ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಈ ಯೋಜನೆಯಡಿಯಲ್ಲಿ ಜಿಲ್ಲಾವಾರು ಯುವ ಜನರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 18ರಿಂದ 29 ವರ್ಷ ವಯೋಮಿತಿಯವರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವಾಸ ಭತ್ಯೆ ಸೇರಿ ಗೌರವಧನವಾಗಿ ತಿಂಗಳಿಗೆ 5000 ರೂ. ನೀಡಲಾಗುವುದು.
ಅರ್ಜಿ ಸಲ್ಲಿಸಲು ಫೆಬ್ರವರಿ 25 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://nyks.nic.in/nycapp/main.asp ಅಥವಾ ಜಿಲ್ಲಾ ಯುವ ಅಧಿಕಾರಿಗಳು, ನೆಹರು ಯುವ ಕೇಂದ್ರ, ರಜತಾದ್ರಿ, ಜಿಲ್ಲಾಧಿಕಾರಿ ಕಛೇರಿ ಆವರಣ, ಮಣಿಪಾಲ ದೂ. ಸಂಖ್ಯೆ 0820-2574992 ಅನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಲ್ಫಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.