ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮಂಗಳೂರು ಫೀಲ್ಡ್ ಔಟ್ರೀಚ್ ಬ್ಯುರೋ ಹಾಗೂ ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ಸಹಭಾಗಿತ್ವದಲ್ಲಿ ಪಂಡಿತ್ ಭೀಮ್ಸೇನ್ ಜೋಶಿ ಜನ್ಮ ವರ್ಷಾಚರಣೆಯ ಅಂಗವಾಗಿ ವೆಬಿನಾರ್ನ್ನು ಆಯೋಜಿಸಲಾಯಿತು.
ಕಲಬುರಗಿಯ ಕೇಂದ್ರೀಯ ವಿವಿಯ ಸಂಗೀತ ಹಾಗೂ ಲಲಿತ ಕಲೆ ವಿಭಾಗದ ಸಹಾಯಕ ಪ್ರಾಧ್ಯಪಕರಾದ ಡಾ. ಜಯದೇವಿ ಜಂಗಮಶೆಟ್ಟಿ ಹಾಗೂ ಹಂಪಿಯ ಕನ್ನಡ ವಿವಿಯ ಸಂಶೋಧನಾ ವಿದ್ಯಾರ್ಥಿ ಜಯಮ್ಮ ದಾನಮ್ಮನ್ನವರ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಆಳ್ವಾಸ್ ಕಾಲೇಜಿನ ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ. ಎಸ್ ಉಪಸ್ಥಿತರಿದ್ದರು.