Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಜಟ್ಟಿಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿಯನ್ನು ಅಭಿವೃದ್ಧಿಪಡಿಸಲು ಚಿಂತನೆ ನಡೆಸಿದ್ದು, ಈಗಾಗಲೇ ಮುಖ್ಯ ರಸ್ತೆ ಸೇರಿದಂತೆ ಅನೇಕ ರಸ್ತೆಗಳನ್ನು ಕಾಂಕ್ರೀಟಿಕರಣ ಮಾಡಲಾಗಿದೆ. ಇನ್ನು ಕೆಲವು ರಸ್ತೆಗಳನ್ನು ಅಭಿವೃದ್ಧಿಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಯರಬೆಟ್ಟು ಶ್ರೀ ಗ್ರಾಮ ಜಟ್ಟಿಗೇಶ್ವರ ದೇವಸ್ಥಾನದ ರಸ್ತೆಯನ್ನು ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟಿಕರಣ ಮಾಡಲಾಗುತ್ತಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.

ಅವರು ಮಲೆನಾಡು ಪ್ರದೇಶಾಭಿವೃದ್ಧಿ ಯೋಜನೆಯಡಿ ಸುಮಾರು 14 ಲಕ್ಷ ರೂ. ವೆಚ್ಚದ ಮಲ್ಯರಬೆಟ್ಟು ಶ್ರೀ ಗ್ರಾಮ ಜಟ್ಟಿಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿಗೆ ಮಲ್ಯರಬೆಟ್ಟು ಶ್ರೀ ಗ್ರಾಮ ಜಟ್ಟಿಗೇಶ್ವರ ದೇವಸ್ಥಾನದ ಸಮೀಪ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ಶ್ರೀನಿವಾಸ ಖಾರ್ವಿ, ಲಲಿತಾ ಖಾರ್ವಿ, ಪ್ರಶಾಂತ ಖಾರ್ವಿ, ಶಾಂತಿ ಖಾರ್ವಿ, ಜಯಂತಿ ಖಾರ್ವಿ, ಶ್ರೀ ಗ್ರಾಮ ಜಟ್ಟಿಗೇಶ್ವರ ದೇವಸ್ಥಾನದ ಅಧ್ಯಕ್ಷ ರಾಮಪ್ಪ ಖಾರ್ವಿ, ಉಪಾಧ್ಯಕ್ಷ ಪಾಂಡು ಖಾರ್ವಿ, ಮಡಿಕಲ್ ಜನಾರ್ದನ ಖಾರ್ವಿ, ಶಿವಪ್ಪ ಖಾರ್ವಿ, ಗಂಗೊಳ್ಳಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಉಪಾಧ್ಯಕ್ಷ ಸೂರಜ್ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.

Exit mobile version