ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಧಾರವಾಡದ ಕರ್ನಾಟಕ ಬಾಲವಿಕಾಸ ಆಕಾಡೆಮಿಯ 2020-21 ಸಾಲಿನ ಅಕಾಡೆಮಿ ಬಾಲಗೌರವ ಪ್ರಶಸ್ತಿಯನ್ನು ಆಳ್ವಾಸ್ ವಿದ್ಯಾರ್ಥಿ ಅಥರ್ವ ಹೆಗ್ಡೆ ಪಡೆದುಕೊಂಡಿದ್ದಾರೆ.
ಇವರು ಮೂಡುಬಿದಿರೆಯ ಪ್ರಸನ್ನ ಹೆಗ್ಡೆ ಹಾಗೂ ಶ್ರೇಯಾ ದಂಪತಿ ಪುತ್ರ ಆಳ್ವಾಸ್ ಸಿ.ಬಿ.ಎಸ್.ಸಿ. ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿರುವ ಇವರ ಚಿತ್ರಕಲೆ, ಸಾಹಿತ್ಯ ಭರತನಾಟ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ವಿಜ್ಞಾನ, ಅಬಕಾಸ್, ಸ್ಪೆಲ್ಬಿ, ಕ್ಲೇ ಮಾಡೆಲಿಂಗ್ ಮುಂತಾದ ಕ್ಷೇತ್ರದ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.