Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಸುವಿಧಾ ಪ್ಯಾಡ್‌ಕ್ರಾಂತಿ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಮಹಿಳಾ ವೇದಿಕೆ ಮತು ಕುಂದಾಪುರದ ಪ್ರದಾನಮಂತ್ರಿ ಜನೌಷಧಿ ಕೇಂದ್ರ ಕುಂದಾಪುರ ರೆಡ್‌ಕ್ರಾಸ್‌ಘಟಕದ ಸಹಯೋಗದಲ್ಲಿಸುವಿಧಾ ಪ್ಯಾಡ್‌ಕ್ರಾಂತಿ ಆಚರಣೆ ಪ್ರಯುಕ್ತ ಉಚಿನ ಸ್ಯಾನಿಟರಿ ಪ್ಯಾಡ್ ವಿತರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕುಂದಾಪುರ ರೆಡ್‌ಕ್ರಾಸ್ ಘಟಕ ಸಭಾಪತಿಗಳಾದ ಕೆ.ಜಯಕರ ಶೆಟ್ಟಿ, ಮಹಿಳೆಯರಲ್ಲಿ ಪ್ಯಾಡ್ ಬಳಕೆ ಮುಖ್ಯವಾಗುತ್ತದೆ. ಶಾಲಾ ಕಾಲೇಜುಗಳಲ್ಲಿ ಅದರ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.

ಕುಂದಾಪುರದ ರೆಡ್‌ಕ್ರಾಸ್ ಘಟಕದ ಸದಸ್ಯೆ ಡಾ. ಸೋನಿ ಡಿಕೋಸ್ತಾ, ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಪ್ಯಾಡ್ ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿಕಾಲೇಜಿನ ಮಹಿಳಾ ವೇದಿಕೆಯ ಸಂಚಾಲಕರಾದಡಾ.ಯಶವಂತಿ ಕೆ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಯಜುಶಾ ಕಾರ್ಯಕ್ರಮ ನಿರ್ವಹಿಸಿ, ಸ್ವಾಗತಿಸಿ ವಂದಿಸಿದರು.

Exit mobile version